ಜೇನು ಕೃಷಿ ಕಾರ್ಯಾಗಾರ

 

ಚಲಿಸುವ ಚೌಕಟ್ಟಿನ ಪೆಟ್ಟಿಗೆಯಲ್ಲಿ ಸಾಕುವುದೇ ಜೇನು ಕೃಷಿ ಜೇನುನೊಣದಲ್ಲಿ ನಾಲ್ಕು ವಿಧಗಳಿವೆ. ತುಡುವೆ ನೊಣವನ್ನು ಮಾತ್ರ ಪೆಟ್ಟಿಗೆಯಲ್ಲಿ ಸಾಕುತ್ತಾರೆ. ಜೇನುನೊಣ ಪಕೃತಿಯಲ್ಲಿ ಬಹುಮುಖ್ಯವಾದ ಪಾತ್ರ ವಹಿಸುತ್ತದೆ. ಜೇನುನೊಣಗಳಿಲ್ಲದೆ ಪರಾಗಸ್ಪರ್ಶ ಸಾಧ್ಯವಿಲ್ಲ, ಜೇನು ಸಂತತಿ ನಾಶ ಆದರೆ ಉತ್ಪಾದನೆ ಕಡಿಮೆಯಾಗಿ ಮನುಷ್ಯ ಸಂತತಿ ಕೂಡ ನಾಶ ಆಗುತ್ತದೆ ಎಂದು ಜೇನು ಕೃ ಮಾಹಿತಿ ಕಾರ್ಯಗಾರದಲ್ಲಿ ರಾಕೋಡಿ ಕೃಷ್ಣ ಭಟ್‌ರವರು ಹೇಳಿದರು.
ದಿನಾಂಕ ೧೩-೦೭/೨೦೧೮ ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥ”ುಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ೪ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಜೇನು ಕೃ ಸಂಘದ ವಿದ್ಯಾರ್ಥಿಗಳಿಗೆ “ಜೇೆನು ಕೃ ಮಾಹಿತಿ ಕಾರ್ಯಗಾರ” ನಡೆುತು.
ಜೇನು ಸಾಕಣೆ ಹೇಗೆ ಮಾಡುವುದು, ಯಾವ ಜೇನಿನಿಂದ ಜೇನು ಕೃ ಮಾಡುವುದು, ಅದರಿಂದಾಗುವ ಲಾಭ ಇತ್ಯಾದಿ ವಿಷಯದ ಕುರಿತಾದ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಜೇನು ಕೃಯ ಕುರಿತಾದ ತಮ್ಮ ಸಂಶಯಗಳನ್ನು ಪ್ರಶ್ನಿಸುವುದರ ಮೂಲಕ ಉತ್ತರವನ್ನು ಕಂಡುಕೊಂಡರು.
ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿಯಾದ ಶಿವಗಿರಿ ಸತೀಶ್ ಭಟ್ ಹಾಗೂ ಮುಖ್ಯಗುರುಗಳಾದ ರವಿರಾಜ ಕಣಂತೂರು ಉಪಸ್ಥಿತರಿದ್ದರು. ಶ್ರೀಮತಿ ದೇವಿಕಾ ಮಾತಾಜಿಯವರು ಸ್ವಾಗತಿಸಿ, ರೂಪಕಲಾ ಮಾತಾಜಿ ವಂದಿಸಿದರು.

Leave a Reply