Archive for February, 2021

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಗಣಿತ ಪ್ರಯೋಗಶಾಲೆಯ ಉದ್ಘಾಟನೆ.

Tuesday, February 16th, 2021
ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಗಣಿತ ಪ್ರಯೋಗಶಾಲೆಯ ಉದ್ಘಾಟನೆ.

 ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ‘ಶಕುಂತಲಾದೇವಿ’ ಗಣಿತ ಶಾಸ್ತ್ರ ಪ್ರಯೋಗಶಾಲೆಯ ಉದ್ಘಾಟನೆಯನ್ನು ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ  ಮಾಡಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ರಾಜು ಮೊಗವೀರ ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ್ ಭಟ್ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ  ಸಂಸ್ಥೆಯ ಸಂಚಾಲಕರಾದ ವಸಂತ ಮಾದವ, ಆಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ಇರಾ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಪ್ರಸಾದ ಕಾಯರ್ ಕಟ್ಟೆ ಉಪಸ್ಥಿತರಿದ್ದರು. ಉಪನ್ಯಾಸಕರಾದ ಕವಿತಾ ಸ್ವಾಗತಿಸಿ ಕು.ಹರ್ಷಿತಾ ವಂದಿಸಿ […]

ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ ಸ್ವಾಗತ ಕಾರ್‍ಯಕ್ರಮ 16.02.2021

Tuesday, February 16th, 2021
ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ ಸ್ವಾಗತ ಕಾರ್‍ಯಕ್ರಮ 16.02.2021

ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ ಸ್ವಾಗತ ಕಾರ್‍ಯಕ್ರಮ 16.02.2021 ಮಂಗಳವಾರ ಶ್ರೀರಾಮ ಪ್ರೌಢಶಾಲೆಯಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಆಗತ ಸ್ವಾಗತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನೂತನ ವಿದ್ಯಾರ್ಥಿಗಳಿಗೆ ಶಿಕ್ಷಕರು ಆರತಿ ಬೆಳಗಿದರು. ನಂತರ ಎಲ್ಲಾ ವಿದ್ಯಾರ್ಥಿಗಳು ಘೃತಾ ಸಮರ್ಪಣೆ ಹಾಗೂ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಹಿರಿಯರಿಂದ ಆಶೀರ್ವಾದ ಪಡೆದುಕೊಂಡರು. ಎಲ್ಲಾ ಗಣ್ಯರು ವಿದ್ಯಾರ್ಥಿಗಳಿಗೆ  ತಿಲಕವಿಟ್ಟು ಆಶೀರ್ವದಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್‍ಕಕ್ರಮವನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್‍ಯಕ್ರಮದಲ್ಲಿ […]