Archive for August, 2023

ದಾದಿಯರೊಂದಿಗೆ ರಕ್ಷಾಬಂಧನ

Thursday, August 31st, 2023
ದಾದಿಯರೊಂದಿಗೆ ರಕ್ಷಾಬಂಧನ

ದಿನಾಂಕ 30.08.2023ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ದಾದಿಯರೊಂದಿಗೆ ಆಚರಿಸಲಾಯಿತು.ರಕ್ಷಾಬಂದನ ಎಂಬುದರ ತಾತ್ಪರ್ಯವೇನೆಂದರೆ ಪ್ರೀತಿಯ ಭಾವದಿಂದ ತನ್ನ ರಕ್ಷಣೆಯ ಜವಾಬ್ದಾರಿಯನ್ನು ಪರಸ್ಪರ ಹಂಚಿಕೊಳ್ಳುವುದು ಎಂದು ಹೇಳಬಹುದು. ಮನುಷ್ಯನು ತನ್ನ ಬದುಕಿನಲ್ಲಿ ಹಲವಾರು ವಸ್ತುಗಳ, ಸಂಬಂಧಗಳ ರಕ್ಷಣೆ ಮಾಡಬೇಕು. ಅದು ಹೆಚ್ಚಾಗಿ ಸ್ತ್ರೀ ಸಂಬಂಧಿತವಾದದ್ದು ಎನ್ನುವುದು ವಿಶೇಷ. ಇದರ ತಾತ್ಪರ್ಯವೇನೆಂದರೆ, ಸ್ತ್ರೀಯರು ಅಬಲರು ಎಂದಲ್ಲ, ಅವರ ರಕ್ಷಣೆ ನಮ್ಮ ಕರ್ತವ್ಯವೆಂದು. ಆದ್ದರಿಂದ ಪುರುಷನು ಭೂಮಿಯನ್ನು ತಾಯಿ ಎಂಬ ಭಾವದಿಂದ, ವಿದ್ಯೆಯನ್ನು ಸರಸ್ವತಿ […]

ರಾಷ್ಟ್ರೀಯ ವಿಚಾರ ಸಂಕಿರಣ 2023

Thursday, August 31st, 2023
ರಾಷ್ಟ್ರೀಯ ವಿಚಾರ ಸಂಕಿರಣ 2023

ವಿದ್ಯಾಕೇಂದ್ರವು ಪ್ರತಿ ವರ್ಷವೂ ಹಮ್ಮಿಕೊಳ್ಳುವ ಕಾರ್ಯಕ್ರಮವಾದಂತಹ ರಾಷ್ಟ್ರೀಯ ವಿಚಾರ ಸಂಕಿರಣವು(11ನೇ) 2023ನೇ ವರ್ಷದಲ್ಲಿ ಜೂನ್ 20ರಂದು ಪದವಿ ವಿಭಾಗದ ಆಜಾದ್ ಭವನದಲ್ಲಿ ನಡೆಯಿತು. ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಕರ್ನಾಟಕ ರಾಜ್ಯ ಹಾಗೂ ಆಸುಪಾಸಿನ ರಾಜ್ಯಗಳ ವಿದ್ಯಾಸಂಸ್ಥೆಗಳು ಪಾಲ್ಗೊಂಡು ದೇಶದ ಹಿತಚಿಂತನೆ ಕುರಿತಾಗಿ ಗೋಷ್ಠಿಗಳನ್ನು ನಡೆಸಲಾಗುವುದು. ಪ್ರಸ್ತುತ ವಿಚಾರ ಸಂಕಿರಣವು ” ಸ್ವತ್ವದ ಆಧಾರದ ಮೇಲೆ ಭಾರತದ ಪುನರುತ್ಥಾನ” ಎಂಬ ವಿಷಯದ ಕುರಿತಾಗಿದ್ದು ಒಟ್ಟು 59 ಸಂಸ್ಥೆಗಳಿಂದ 228 ಶಿಕ್ಷಕ ಪ್ರಾಧ್ಯಾಪಕ ವರ್ಗದವರು 485 ವಿದ್ಯಾರ್ಥಿಗಳು 167 ಇತರ […]