ಯುಗಾದಿ ಹಬ್ಬ ಹಾಗೂ ಹೊಸ ವರ್ಷದ ಶುಭಾಶಯಗಳು

Tuesday, April 13th, 2021
ಯುಗಾದಿ ಹಬ್ಬ ಹಾಗೂ ಹೊಸ ವರ್ಷದ ಶುಭಾಶಯಗಳು

ಶ್ರೀರಾಮ ಪ್ರೌಢಶಾಲೆಯ ನೂತನ ಮುಖ್ಯೋಪಾಧ್ಯಾಯರಾಗಿ ಶ್ರೀಮತಿ ಶಾಂಭವಿ ಮಾತಾಜಿ

Thursday, April 1st, 2021
ಶ್ರೀರಾಮ ಪ್ರೌಢಶಾಲೆಯ   ನೂತನ ಮುಖ್ಯೋಪಾಧ್ಯಾಯರಾಗಿ ಶ್ರೀಮತಿ ಶಾಂಭವಿ ಮಾತಾಜಿ

ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಶ್ರೀಮತಿ ವಸಂತಿ ಮಾತಾಜಿಯವರ ನಿವೃತ್ತಿ ಕಾರಣ ನೂತನ ಮುಖ್ಯೋಪಾಧ್ಯಾಯರಾಗಿ ಶ್ರೀಮತಿ ಶಾಂಭವಿ ಮಾತಾಜಿಯವರಿಗೆ ಜವಾಬ್ದಾರಿ ನೀಡಲಾಯಿತು. ಶ್ರೀರಾಮ ಮಂದಿರದಲ್ಲಿ ಪೂಜೆಸಲ್ಲಿಸಿ, ವಿದ್ಯಾಕೇಂದ್ರದ ಹಿರಿಯರಾದ ಡಾ ಪ್ರಭಾಕರ ಭಟ್ ಕಲ್ಲಡ್ಕ, ಡಾ. ಕಮಲ ಪ್ರ.ಭಟ್, ಶ್ರೀ ವಸಂತ ಮಾಧವ, ಶ್ರೀ ರಮೇಶ್ ಎನ್ ಇವರ ಸಮ್ಮುಖದಲ್ಲಿ ಶ್ರೀಮತಿ ವಸಂತಿ ಮಾತಾಜಿಯವರು ಅಧಿಕಾರ ಹಸ್ತಾಂತರಿಸಿದರು. ಆಡಳಿತ ಮಂಡಳಿ ಸದಸ್ಯೆಯರುಗಳಾದ ಶ್ರೀಮತಿ ಲಕ್ಸ್ಮಿ ರಘುರಾಜ್, ಶ್ರೀಮತಿ ಸುಧಾ ಭಟ್, ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಪ್ರೌಢಶಾಲೆಯ ಎಲ್ಲಾ ಶಿಕ್ಷಕರು, […]

ಕೋವಿಡ್ ವ್ಯಾಕ್ಸಿನ್ ಪಡೆಯಲು ಉಚಿತ ವಾಹನ ವ್ಯವಸ್ಥೆ

Tuesday, March 30th, 2021
ಕೋವಿಡ್ ವ್ಯಾಕ್ಸಿನ್ ಪಡೆಯಲು ಉಚಿತ ವಾಹನ ವ್ಯವಸ್ಥೆ

೪೫ ವರ್ಷ ಮೇಲ್ಪಟ್ಟವರಿಗೆ ಸರಕಾರದ ವತಿಯಿಂದ ಕೊಡಮಾಡುವ ಕೋವಿಡ್ ವ್ಯಾಕ್ಸಿನ್ ಪಡೆಯಲು ವಿವಿಧ ಗ್ರಾಮಗಳಾದ ಅಮ್ಟೂರು, ಗೋಳ್ತಮಜಲು, ಬಾಳ್ತಿಲ, ನರಿಕೊಂಬುಗಳಿಂದ ಆಗಮಿಸುವ ಎಲ್ಲಾ ನಾಗರಿಕರಿಗೆ ಶ್ರೀರಾಮ ವಿದ್ಯಾಕೇಂದ್ರದ ವತಯಿಂದ ಉಚಿತ ವಾಹನದ ವ್ಯವಸ್ಥೆ ಮಾಡಲಾಗಿತ್ತು.

ಪ್ರವೇಶೋತ್ಸವ

Monday, March 15th, 2021
ಪ್ರವೇಶೋತ್ಸವ

ದಿನಾಂಕ 13.03.2021 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ನೂತನವಾಗಿ ಸೇರ್ಪಡೆಗೊಂಡ ವಿರ್ದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಜೀವನ ಮೌಲ್ಯಗಳನ್ನು ತಿಳಿಸಬೇಕಾದುದು ಶಾಲೆಯ ಕರ್ತವ್ಯ. ಈ ಶಾಲೆಯು ಭಾರತೀಯ ಸನಾತನ ಮಾದರಿಯ ಶಿಕ್ಷಣವನ್ನು ಮಗುವಿಗೆ ಕೊಡುವ ಧ್ಯೇಯವನ್ನು ಇಟ್ಟುಕೊಂಡು ಮುಂದುವರಿಸುತ್ತಾ ಬಂದಿದೆ. ಇಲ್ಲಿ ರಾಷ್ಟ್ರೀಯತೆಯನ್ನು ಕಲಿಸಿಕೊಡುತ್ತದೆ. ಕನ್ನಡವನ್ನು ಮೂಲೆ ಗುಂಪಾಗಿಸುತ್ತಿರುವ ಈ ಕಾಲಘಟ್ಟದಲ್ಲಿ ಶ್ರೀರಾಮ ಶಾಲೆಯು 1000 ಕ್ಕೂ ಅಧಿಕ ಮಕ್ಕಳನ್ನು ಹೊಂದಿ ಭಾಷಾ ಮಾಧ್ಯಮದಲ್ಲೆ ಹೆಚ್ಚು ಮಕ್ಕಳನ್ನು ಹೊಂದಿದ ಶಾಲೆ ಎಂಬ ಹೆಗ್ಗಳಿಕೆಗೆ […]

7ನೇ ತರಗತಿಯ ವಿದ್ಯಾರ್ಥಿಗಳ ದೀಪ ಪ್ರದಾನ

Friday, March 5th, 2021
7ನೇ ತರಗತಿಯ ವಿದ್ಯಾರ್ಥಿಗಳ ದೀಪ ಪ್ರದಾನ

ದಿನಾಂಕ ೦೨/೦೩/೨೦೨೧ ರಂದು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ೨೦೧೯-೨೦ ನೇ ಸಾಲಿನ ವಿದ್ಯಾರ್ಥಿಗಳ ದೀಪ ಪ್ರದಾನ ಕಾರ್ಯಕ್ರಮ ನಡೆಸಲಾಯಿತು. ಭಾರತ ಸನಾತನ ದೇಶ, ಈಗ ನಾಯಕನಾಗಿ ಭಾರತ ಎದ್ದು ನಿಂತಿದೆ, ಈ ಶಾಲೆಯಲ್ಲಿ ಕೇವಲ ವಿಷಯಗಳ ಶಿಕ್ಷಣ ನೀಡುತ್ತಿಲ್ಲ, ಜೊತೆಗೆ ತನ್ನ ಜೀವನ ಹೇಗಿರಬೇಕು ಎಂಬ ಬದುಕಿನ ಶಿಕ್ಷಣ ನೀಡುತ್ತಿದೆ. ಜೀವನದ ಮೌಲ್ಯಗಳನ್ನು ಅರಿತುಕೊಳ್ಳುವ ಶಿಕ್ಷಣ ಇಂದಿನ ಪೀಳಿಗೆಗೆ ದೊರಕಬೇಕು ಎಂಬ ನಿಟ್ಟಿನಲ್ಲಿ ಶ್ರೀರಾಮ ವಿದ್ಯಾಸಂಸ್ಥೆ ಕಾರ್‍ಯನಿರ್ವಹಿಸುತ್ತಿದೆ. ತಾನು ಕಲಿತ ಮೌಲ್ಯವನ್ನು, ಸಂಸ್ಕಾರವನ್ನು […]

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಗಣಿತ ಪ್ರಯೋಗಶಾಲೆಯ ಉದ್ಘಾಟನೆ.

Tuesday, February 16th, 2021
ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಗಣಿತ ಪ್ರಯೋಗಶಾಲೆಯ ಉದ್ಘಾಟನೆ.

 ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ‘ಶಕುಂತಲಾದೇವಿ’ ಗಣಿತ ಶಾಸ್ತ್ರ ಪ್ರಯೋಗಶಾಲೆಯ ಉದ್ಘಾಟನೆಯನ್ನು ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ  ಮಾಡಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ರಾಜು ಮೊಗವೀರ ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ್ ಭಟ್ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ  ಸಂಸ್ಥೆಯ ಸಂಚಾಲಕರಾದ ವಸಂತ ಮಾದವ, ಆಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ಇರಾ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಪ್ರಸಾದ ಕಾಯರ್ ಕಟ್ಟೆ ಉಪಸ್ಥಿತರಿದ್ದರು. ಉಪನ್ಯಾಸಕರಾದ ಕವಿತಾ ಸ್ವಾಗತಿಸಿ ಕು.ಹರ್ಷಿತಾ ವಂದಿಸಿ […]

ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ ಸ್ವಾಗತ ಕಾರ್‍ಯಕ್ರಮ 16.02.2021

Tuesday, February 16th, 2021
ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ ಸ್ವಾಗತ ಕಾರ್‍ಯಕ್ರಮ 16.02.2021

ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ ಸ್ವಾಗತ ಕಾರ್‍ಯಕ್ರಮ 16.02.2021 ಮಂಗಳವಾರ ಶ್ರೀರಾಮ ಪ್ರೌಢಶಾಲೆಯಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಆಗತ ಸ್ವಾಗತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನೂತನ ವಿದ್ಯಾರ್ಥಿಗಳಿಗೆ ಶಿಕ್ಷಕರು ಆರತಿ ಬೆಳಗಿದರು. ನಂತರ ಎಲ್ಲಾ ವಿದ್ಯಾರ್ಥಿಗಳು ಘೃತಾ ಸಮರ್ಪಣೆ ಹಾಗೂ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಹಿರಿಯರಿಂದ ಆಶೀರ್ವಾದ ಪಡೆದುಕೊಂಡರು. ಎಲ್ಲಾ ಗಣ್ಯರು ವಿದ್ಯಾರ್ಥಿಗಳಿಗೆ  ತಿಲಕವಿಟ್ಟು ಆಶೀರ್ವದಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್‍ಕಕ್ರಮವನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್‍ಯಕ್ರಮದಲ್ಲಿ […]

ಉಚಿತ ಲ್ಯಾಪ್‌ಟಾಪ್ ವಿತರಣಾ ಸಮಾರಂಭ

Saturday, December 26th, 2020
ಉಚಿತ  ಲ್ಯಾಪ್‌ಟಾಪ್ ವಿತರಣಾ ಸಮಾರಂಭ

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ಪದವಿ ವಿದ್ಯಾಲಯದ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಸನ್ಮಾನ್ಯ ಶ್ರೀ ಡಿ.ವಿ ಸದಾನಂದ ಗೌಡ ಇವರ ಉಪಸ್ಥಿತಿಯಲ್ಲಿ ಉಚಿತ ಲ್ಯಾಪ್‌ಟಾಪ್ ವಿತರಿಸಲಾಯಿತು. ಅಧ್ಯಕ್ಷತೆಯನ್ನು ಡಾ| ಪ್ರಭಾಕರ ಭಟ್, ಕಲ್ಲಡ್ಕ ಅಧ್ಯಕ್ಷರು, ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇವರು  ವಹಿಸಿದ್ದರು. ಮಖ್ಯ ಅತಿಥಿಗಳಾಗಿ ಸನ್ಮಾನ್ಯ ಶ್ರೀ ರಾಜೇಶ್ ನಾಕ್ ಯು. ಶಾಸಕರು, ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಡಾ| ಎಂ.ಎನ್. ರಾಜೇಂದ್ರಕುಮಾರ್ ಅಧ್ಯಕ್ಷರು, ಕ.ರಾ.ಸ.ಮಾ.ಮ.ನಿ.ಬೆಂಗಳೂರು., ನಿರ್ದೇಶಕರು, ಇಫ್ಕೋ ನವದೆಹಲಿ, ಅಧ್ಯಕ್ಷರು ದ.ಕ.ಜಿಲ್ಲಾ […]

ವಿದ್ಯಾರ್ಥಿ ಸಂಘದ ಉದ್ಘಾಟನೆ

Friday, December 18th, 2020
ವಿದ್ಯಾರ್ಥಿ ಸಂಘದ ಉದ್ಘಾಟನೆ

ಬಂಟ್ವಾಳ,  ಡಿಸೆಂಬರ್ 16 :  ಶ್ರೀರಾಮ ಪದವಿ ಮಹಾವಿದ್ಯಾಲಯ ಕಲ್ಲಡ್ಕ ಇದರ 2020- 21 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರು  ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ  ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕರಾದ  ವಸಂತಮಾಧವ ಉಪಸ್ಥಿತರಿದ್ದರು.

ತುಳಸಿ ಪೂಜೆ ಹಾಗೂ ಗೋಪೂಜೆ

Friday, November 27th, 2020
ತುಳಸಿ ಪೂಜೆ ಹಾಗೂ ಗೋಪೂಜೆ

ಶ್ರೀರಾಮ ಶಿಶುಮಂದಿರ ಕಲ್ಲಡ್ಕ ಇದರ ವತಿಯಿಂದ ಉತ್ಥಾನ ದ್ವಾದಶಿ ನಿಮಿತ್ತ ಶ್ರೀರಾಮ ವಿದ್ಯಾಕೇಂದ್ರದಲ್ಲಿ ತುಳಸಿ ಪೂಜೆ ಹಾಗೂ ಗೋಪೂಜೆ ನೆರವೇರಿತು. ಪೂಜಾ ಕಾರ್‍ಯಕ್ರಮವನ್ನು ಸೂರ್‍ಯಭಟ್ ಕಶೆಕೋಡಿ ಇವರು ನಡೆಸಿಕೊಟ್ಟರು. ಡಾ. ಪ್ರಭಾಕರ ಭಟ್ ದಂಪತಿಗಳು ಗೋವುಗಳಿಗೆ ಆರತಿ ಬೆಳಗಿ, ಹೂಹಾರ ಹಾಕಿ, ಬಾಳೆಹಣ್ಣು, ದೋಸೆಯನ್ನು ತಿನ್ನಿಸಿದರು. ಈ ಸಂದರ್ಭದಲ್ಲಿ ಸಂಚಾಲಕರು ವಸಂತ ಮಾಧವ, ವಿಭಾಗದ ಮುಖ್ಯಸ್ಥರುಗಳು, ಅಧ್ಯಾಪಕ ವೃಂದ, ಹಾಗೂ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.