ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕಕ್ಕೆ ಯೂತ್ ಫಾರ್ ಸೇವಾ ಇವರು ಬೇಟಿ ನೀಡಿದ ಸಂದರ್ಭ
Saturday, September 21st, 2019Posted by Sri Rama Vidyakendra Trust, Kalladka on Saturday, September 21, 2019
Posted by Sri Rama Vidyakendra Trust, Kalladka on Saturday, September 21, 2019
Posted by Sri Rama Vidyakendra Trust, Kalladka on Wednesday, September 18, 2019
ದಿನಾಂಕ 3.8.2019ರ ಶನಿವಾರದಂದು ಪರಿಸರ ಸಂರಕ್ಷಣಾ ಕಾಳಜಿಯನ್ನು ಗ್ರಾಮ ಮಟ್ಟದಿಂದಲೇ ಮೂಡಿಸುವ ನಿಟ್ಟಿನಲ್ಲಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲಾ ವತಿಯಿಂದ ಮನೆ ಮನೆಯಲ್ಲಿ ಗಿಡ ನೆಡುವ ವೃಕ್ಷಾರೋಪಣ ಎಂಬ ವಿಶೇಷ ಅಭಿಯಾನವನ್ನು ಅಮ್ಟೂರು ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ಮನೆ-ಮನೆಯಲ್ಲಿ ವೃಕ್ಷ ಜಾಗೃತಿ ಮೂಡಿಸುವುದರೊಂದಿಗೆ ಊರಿನವರಲ್ಲಿಯೂ ಪರಿಸರ ಪ್ರಜ್ಞೆ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಯಿತು. ಶ್ರೀಕೃಷ್ಣ ಮಂದಿರ ಅಮ್ಟೂರು ಇಲ್ಲಿನ ಅಧ್ಯಕ್ಷರಾದ ರಮೇಶ್ ಕರಿಂಗಾಣ ಇವರು ಮಂದಿರದ ಮುಂಭಾಗದಲ್ಲಿ ಹಲಸಿನ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಅಶ್ವಥ್ಥಮೇಕಂ […]
ಕಲ್ಲಡ್ಕ: ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕದಲ್ಲಿ ಕೃಷಿ ಚಟುವಟಿಕೆ ದಿನಾಂಕ: 31.7.219 2019-20ನೇ ಸಾಲಿನ ಕೃಷಿ ಸಂಘದ ಉದ್ಘಾಟನೆ ಮತ್ತು ಕೃಷಿ ಚಟುವಟಿಕೆ ಸುಧೆಕ್ಕಾರಿನಲ್ಲಿ ನಡೆಯಿತು. ಸಂಘದ ಉದ್ಘಾಟನೆಯನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿಯಾದ ಶ್ರೀ.ಸತೀಶ್ ಶಿವಗಿರಿಯವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ, ದೇಶದ ಆರ್ಥಿಕತೆಯಲ್ಲಿ ಸಾವಯವ ಕೃಷಿಯ ಮಹತ್ವವನ್ನು ತಿಳಿಸಿ ವಿದ್ಯಾರ್ಥಿಗಳನ್ನು ಸಾವಯವ ಕೃಷಿಗೆ ಪ್ರೋತ್ಸಾಹಿಸಿದರು. ಕೃಷಿ ಚಟುವಟಿಕೆಗೆ ಚಾಲನೆ ನೀಡಿದ ಪ್ರಗತಿಪರ ಕೃಷಿಕರು ಮತ್ತು ಗೋಳ್ತಮಜಲು ಪಂಚಾಯತ್ ಸದಸ್ಯರಾದ ಶ್ರೀ. ಜಯಂತ […]
ದಿನಾಂಕ 26.07.2019ರ ಶುಕ್ರವಾರದಂದು ಕಾರ್ಗಿಲ್ ವಿಜಯೋತ್ಸವದ 20ನೇ ವರುಷದ ಸಂಭ್ರಮವನ್ನು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವೀರ ಯೋಧರ ಪೋಷಕರನ್ನು ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಗಿಲ್ ಯುದ್ಧವು ನಡೆದು ಇಂದಿಗೆ 20 ವರ್ಷ ಸಂದರೂ ಅದರ ನೆನಪು ಭಾರತೀಯರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಇದೇ ದಿವಸ ಸರಿಯಾಗಿ ೨೦ ವರುಷಗಳ ಹಿಂದೆ ಅಂದರೆ ೨೬ ಜುಲೈ ೧೯೯೯ ರಂದು ಭಾರತೀಯ ಸೇನೆಯು ಪಾಕಿಸ್ತಾನದ ಹಿಡಿತದಲ್ಲಿ ಇದ್ದ ಕಾರ್ಗಿಲ್ನ ಎಲ್ಲಾ ಕ್ಷೇತ್ರಗಳನ್ನು ತನ್ನ […]
ಬಂಟ್ವಾಳ, ಜು.೧೧: ಬಡವರ ಹಣ್ಣು ಎಂದೇ ಖ್ಯಾತಿ ಪಡೆದ, ಯಾವುದೇ ರಾಸಾಯನಿಕದ ಬಳಕೆಯಿಲ್ಲದೇ ಬೆಳೆದ ಒಂದು ಸಂಪೂರ್ಣ ಆಹಾರ ಹಲಸು. ಇಂದು ಬೇರೆ ಬೇರೆ ಪ್ರಯೋಗಕ್ಕೆ ಒಳಗಾಗಿ ವಿವಿಧ ಮುಖಗಳಲ್ಲಿ ಒಂದು ಪ್ರಮುಖ ಬೆಳೆಯೆಂದು ಗುರುತಿಸಲ್ಪಟ್ಟಿದೆ. ಇಂತಹ ಹಲಸನ್ನು ಆಧಾರವಾಗಿಟ್ಟು ಆಯೋಜಿಸಿದ ಹಲಸಿನ ಮೇಳದಿಂದಾಗಿ ಇಲ್ಲಿ ವಿಜ್ಞಾನದೊಂದಿಗೆ ಜೀವನ ವಿಜ್ಞಾನವನ್ನೂ ಬೋಧಿಸಿದಂತಾಗಿದೆ. ಇದು ಹಲಸನ್ನು ಮೌಲ್ಯವರ್ಧಿತಗೊಳಿಸುವ ಪ್ರಯೋಗಾತ್ಮಕವಾದ ಕಾರ್ಯಕ್ರಮವಾದರೂ ಮುಂದೆ ಇದೊಂದು ಕ್ರಾಂತಿಕಾರಕ ಬದಲಾವಣೆ ತರಬಲ್ಲ ಹೆಜ್ಜೆಯಾಗಿದೆ. ಆಧುನಿಕ ಕಾಲಕ್ಕೆ ಬೇಕಾದಂತೆ ಹಲಸು ತನ್ನ ಮೌಲ್ಯವರ್ಧಿಸಿಕೊಂಡು ಬೆಳೆಯುತ್ತಿರುವುದು […]
ಸನ್ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಹೋದರಾದ ಶ್ರೀ ಸೋಮಭಾಯಿ ದಾಮೋದರದಾಸ್ ಮೋದಿ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕಕ್ಕೆ ಬೇಟಿ. ಶಿಶುಮಂದಿರ ಮತ್ತು ಪ್ರಾಥಮಿಕ ಶಾಲಾ ಪುಟಾಣಿಗಳ ಚಟುವಟಿಕೆಗಳನ್ನು ವೀಕ್ಷಿಸಿ, ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಇವರ ಬಾವ ಲಲಿತ್ ಶಾ ಹಾಗೂ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷಾರದ ಶ್ರೀ ರಾಜಶೇಖರ ಗಾಣಿಗ, ರಾಜ್ಯ ಮಹಿಳಾ ಮೋರ್ಚಾದ ಕಾರ್ಯದರ್ಶಿ ಗೀತಾಂಜಲಿ ಸುವರ್ಣ, ಅಖಿಲ ಕರ್ನಾಟಕ ಗಾಣಿಗರ ಸಂಘದ […]
ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳಾದಾಗ ಒಪ್ಪಿಕೊಳ್ಳುವ ಮನೋಸ್ಥಿತಿ ನಿರ್ಮಾಣವಾಗಬೇಕು ಆಗ ಶಿಕ್ಷಣ ದೃಢವಾಗುತ್ತದೆ ಎಂದು ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ದಶಮಾನೋತ್ಸವ ಕಾರ್ಯಕ್ರಮ ಉದ್ಘ್ಘಾಟಿಸಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಇವರು ಮಾತನಾಡಿದರು. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ ೨೧೦ ಕಾಲೇಜುಗಳಲ್ಲಿ ರಾಷ್ಟ್ರಾಭಿಮಾನ, ಸಂಸ್ಕಾರ, ಸಂಸ್ಕೃತಿಯನ್ನು ಬಿಂಬಿಸುವ ಶ್ರೀರಾಮ ಕಾಲೇಜಿಗೆ ವಿಶೇಷ ಸ್ಥಾನಮಾನ. ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳಬಲ್ಲ ಮಾನಸಿಕ ಶಾರೀರಿಕ, ಬೌದ್ಧಿಕ, ಸಾಮಾಜಿಕ ಆಧ್ಯಾತ್ಮಿಕ ೫ ಆಯಾಮಗಳ ಮೂಲಕವೇ ಇಲ್ಲಿ ಶಿಕ್ಷಣವನ್ನು ನೀಡುತ್ತಿರುವುದು ವಿಶೇಷ ಎಂದರು. […]
ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ: ದಿನಾಂಕ : ೨೧/೦೬/೨೦೧೯ ಬಂಟ್ವಾಳ : ಆನಂದ ಮತ್ತು ಸ್ವಾತಂತ್ರ್ಯ ಜೀವನಕ್ಕೆ ಅವಶ್ಯಕವಾದ ಎರಡು ವಿಷಯಗಳು. ಇವುಗಳನ್ನು ಸಾಧಿಸಲು ’ಯೋಗ’ ಎಂಬುದು ಒಂದು ಒಳ್ಳೆಯ ಸಾಧನ ಎಂದು ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಆರ್ಟ್ ಆಫ್ ಲಿವಿಂಗ್ನ ಯೋಗ ಶಿಕ್ಷಕರಾದ ಯತೀಶ್ ಬೊಂಡಾಲ ಅವರು ಹೇಳಿದರು. ಶ್ರೀಯುತರು ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಯೋಗವು […]
ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇಲ್ಲಿನ ಎಲ್ಲಾ ಶಿಕ್ಷಕರು, ಶಿಕ್ಷಕೇತರರು, ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಅಭಿವೃದ್ಧಿ ಸಮಿತಿ ಸದಸ್ಯರಿಗೆ ಒಂದು ದಿನದ ಚಿಂತನ ಬೈಠಕ್ ಶ್ರೀರಾಮಚಂದ್ರಪುರ ಮಠ ಪೆರಾಜೆ ಮಾಣಿಯಲ್ಲಿ ನಡೆಯಿತು. ಎರಡು ಅವಧಿಯಲ್ಲಿ ಶೈಕ್ಷಣಿಕವಾಗಿ ಧ್ಯೇಯ ಸಾಧನೆ ಮತ್ತು ಕಾರ್ಯಕ್ರಮಗಳ ಮೂಲಕ ಧ್ಯೇಯ ಸಾಧನೆ ಬಗ್ಗೆ ವಿವಿಧ ವಿಭಾಗದ ಶಿಕ್ಷಕರು ಮಾತನಾಡಿದರು. ನಂತರ ತಮ್ಮ ವಿಭಾಗಗಳ ವಾರ್ಷಿಕ ಯೋಜನೆ ರೂಪಿಸಲಾಯಿತು. ಕಜಂಪಾಡಿ ಸುಬ್ರಹಣ್ಯಭಟ್ ಮತ್ತು ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ಮಾರ್ಗದರ್ಶನ ಮಾಡಿದರು.