ಆಗತ – ಸ್ವಾಗತ ಹಾಗೂ ಎಸ್.ಎಸ್.ಎಲ್.ಸಿ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ 22.6.2022

Saturday, June 25th, 2022
ಆಗತ – ಸ್ವಾಗತ  ಹಾಗೂ ಎಸ್.ಎಸ್.ಎಲ್.ಸಿ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ 22.6.2022

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ  – ಆಗತ – ಸ್ವಾಗತ  ಹಾಗೂ ಎಸ್.ಎಸ್.ಎಲ್.ಸಿ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ೨೨/೬/೨೦೨೨ 2022-23 ಶೈಕ್ಷಣಿಕ ವರ್ಷಕ್ಕೆ ಹೊಸತಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ವಿಶೇಷ ವಿಜೃಂಭಣೆಯಿಂದ ಸ್ವಾಗತಿಸಲಾಯಿತು.  ಗಣ್ಯ ಅತಿಥಿಗಳು ದೀಪ ಪ್ರಜ್ವಲನೆಮಾಡಿ ಘೃತಾಹುತಿಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಸಾಧಕರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ  ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ! ಪ್ರಭಾಕರ ಭಟ್ ಕಲ್ಲಡ್ಕ ಇವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಶಾಲೆ ಪ್ರಾರಂಭದ […]

S.S.L.C RESULT 2022

Friday, May 20th, 2022
S.S.L.C RESULT 2022

S.S.L.C RESULT 2022

ರಾಷ್ಟ್ರೀಯ ವಿಜ್ಞಾನ ದಿನಾಚರಣೆ – ಪರಿಸರವನ್ನು ಪ್ರೀತಿಸಬೇಕು- ಪದ್ಮಶ್ರೀ ಶ್ರೀ ಅಮೈ ಮಹಾಲಿಂಗ ನಾಯ್ಕ

Friday, March 4th, 2022

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಭಾರತೀಯ ಭೌತಶಾಸ್ತ್ರಜ್ಞ ಸರ್ ಸಿ.ವಿ ರಾಮನ್‌ರವರು ಆವಿಷ್ಕರಿಸಿದ ರಾಮನ್ ಪ್ರಭಾವದ ದಿನವನ್ನು ಗುರುತಿಸುವ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಒಂದು ವಾರಗಳ ಕಾಲ ಜ್ಞಾನಧಾರ ಸಪ್ತಾಹ ಎಂಬ ಕಾರ್ಯಕ್ರಮದಡಿಯಲ್ಲಿ ನಡೆಸಿ ದಿನಾಂಕ 28.02.2022 ರಂದು ಸಮಾರೋಪ ಕಾರ್ಯಕ್ರಮ ನಡೆಸಲಾಯಿತು.     ಬಂದತಂಹ ಅಥಿತಿಗಳಿಗೆ ಅಡಿಕೆ ಗಿಡಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಪದ್ಮಶ್ರೀ ಅಮೈ ಮಹಾಲಿಂಗ ನಾಯ್ಕರವರನ್ನು ಗೌರವಿಸಲಾಯಿತು.ಪದ್ಮಶ್ರೀ ಶ್ರೀ […]

ವಿದ್ಯಾಭಾರತಿ ಅ.ಭಾ ಸಂಘಟನಾ ಕಾರ್ಯದರ್ಶಿ ಶ್ರೀ ಕಾಶಿಪತಿ ಇವರು ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ

Thursday, February 17th, 2022
ವಿದ್ಯಾಭಾರತಿ ಅ.ಭಾ ಸಂಘಟನಾ ಕಾರ್ಯದರ್ಶಿ ಶ್ರೀ ಕಾಶಿಪತಿ ಇವರು ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ

ವಿದ್ಯಾಭಾರತಿ ಅ.ಭಾ ಸಂಘಟನಾ ಕಾರ್ಯದರ್ಶಿ ಶ್ರೀ ಕಾಶಿಪತಿ ಇವರು ದಿನಾಂಕ 16.02.2022ರಂದು ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿ, ವಿದ್ಯಾಕೇಂದ್ರದ ಬೋಧಕ ಸಿಬ್ಬಂದಿಯವರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು.  ಮರುದಿನ ಶ್ರೀರಾಮ ಪ್ರೌಢಶಾಲೆಯ  ಸರಸ್ವತಿ ವಂದನ ಸಭಾದಲ್ಲಿ ಉಪಸ್ಥಿತರಿದ್ದು  ವಿದ್ಯಾರ್ಥಿಗಳಿಗೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾಗಿ ದೇಶಕ್ಕೆ ವಿಜಯ ತಂದ ಸಾಹಸಿ ವೀರ ಪರಾಕ್ರಮಿಯಾದ ವಿಕ್ರಂ ಭಾದ್ರ ಇವರ ಕಥೆಯನ್ನು ಹೇಳಿ ರೋಮಾಂಚನಗೊಳಿಸಿದರು.  ಬಳಿಕ ಶಿಶುಮಂದಿರ, ಪ್ರಾಥಮಿಕ ಶಾಲಾ ಮಕ್ಕಳ ಚಟುವಟಿಕೆಗಳನ್ನು ವೀಕ್ಷಣೆ ಮಾಡಿ ಶಿಕ್ಷಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ […]

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ 73ನೇ ಗಣರಾಜ್ಯೋತ್ಸವ

Wednesday, January 26th, 2022
ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ 73ನೇ ಗಣರಾಜ್ಯೋತ್ಸವ

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ, ಕಾಂಪ್ರಬೈಲ್ ಶ್ರೀ ಉಳ್ಳಾಲ್ತಿ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ಜಯಾನಂದ ಆಚಾರ್ಯ ಧ್ವಜಾರೋಹಣ ಮಾಡಿದರು. ಕಾರ್ಯಕ್ರಮದಲ್ಲಿ ಪ್ರೌಢ ಶಾಲೆಯ ಎನ್.ಸಿ.ಸಿ ವಿದ್ಯಾರ್ಥಿಗಳು ಘೋಷ್ ವಾದನದೊಂದಿಗೆ  ಪಥಸಂಚಲನ ನಡೆಸಿದರು.ನಂತರ ಪ್ರೌಢಶಾಲೆಯಲ್ಲಿ ನಡೆದ ಸಭಾ ಕಾರ್‍ಯಕ್ರಮದಲ್ಲಿ ಗಣ್ಯರು ಡಾ. ಬಿ.ಆರ್. ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಬಳಿಕ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಯತಿರಾಜ್ ಪೆರಾಜೆ ಮಾತನಾಡುತ್ತಾ ಇಂದು ಜಯಂತಿ, ಉತ್ಸವಗಳ ಆಚರಣೆ ನಾಟಕೀಯವಾಗಿದ್ದು, ಉದ್ದೇಶಿತ […]

ಭಜನೆಯೇ ನನ್ನ ಯಶಸ್ಸಿನ ಹಿಂದಿನ ರಹಸ್ಯ ಕಲ್ಲಡ್ಕದ ಆಜಾದಿ ಪರ್ವ ಸಮಾರೋಪ ಸಮಾರಂಭದಲ್ಲಿ ಖ್ಯಾತ ಗಾಯಕ ಸಂದೇಶ್ ನೀರುಮಾರ್ಗ

Friday, January 14th, 2022
ಭಜನೆಯೇ ನನ್ನ ಯಶಸ್ಸಿನ ಹಿಂದಿನ ರಹಸ್ಯ ಕಲ್ಲಡ್ಕದ ಆಜಾದಿ ಪರ್ವ ಸಮಾರೋಪ ಸಮಾರಂಭದಲ್ಲಿ ಖ್ಯಾತ ಗಾಯಕ ಸಂದೇಶ್ ನೀರುಮಾರ್ಗ

ಜ: ೧೪, ಕಲ್ಲಡ್ಕದ ಶ್ರೀರಾಮ ಪ್ರಥಮದರ್ಜೆ ಕಾಲೇಜಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ದ.ಕ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ನಡೆದ ?ಆಜಾದಿ ಪರ್ವ? ಹೆಸರಿನ ಅಂತರ್‌ಕಾಲೇಜು ಫೆಸ್ಟ್‌ನ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಲರ್ಸ್ ಕನ್ನಡ “ಎದೆ ತುಂಬಿ ಹಾಡುವೆನು “ಖ್ಯಾತಿಯ ಶ್ರೀ ಸಂದೇಶ್ ನೀರುಮಾರ್ಗ ಮಾತನಾಡುತ್ತಾ, ?ಬಾಲ್ಯದಿಂದಲೂ ಭಜನೆಯಲ್ಲಿ ಅತೀವ ಆಸಕ್ತಿ ಇದ್ದ ನನಗೆ ಇಂದು ಅದುವೇ ಮೆಟ್ಟಿಲಾಗಿ ಎತ್ತರಕ್ಕೆ ಕರೆದೊಯ್ದಿದೆ. ಎಸ್. ಪಿ. ಬಾಲಸುಬ್ರಹ್ಮಣ್ಯರಂತಹ ಶ್ರೇಷ್ಟ ಗಾಯಕರು ರಚಿಸಿದ […]

ನೂತನ ಗಣಕ ವಿಜ್ಞಾನ ಕೊಠಡಿ ಉದ್ಘಾಟನೆ 15.11.2021

Tuesday, November 30th, 2021
ನೂತನ ಗಣಕ ವಿಜ್ಞಾನ ಕೊಠಡಿ ಉದ್ಘಾಟನೆ 15.11.2021

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿ ‘ಕಣಾದ, ಎಂಬ ಹೆಸರಿನ 60 ಕಂಪ್ಯೂಟರ್‌ಗಳನ್ನು ಇಡುವುದಕ್ಕೆ ವ್ಯವಸ್ಥೆ ಇರುವ ನೂತನ ಗಣಕ ವಿಜ್ಞಾನ ಕೊಠಡಿಯನ್ನು ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥರಾದ ಶ್ರೀ ವಾಸುದೇವ ಕಾಮತ್ ಇವರು ದೀಪ ಬೆಳಗಿಸಿ, ವಿಶ್ವದ ಪ್ರಪ್ರಥಮ ಅಣುವಿಜ್ಞಾನಿ ಕಣಾದ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ, ವಿಶ್ವದ ಪ್ರಪ್ರಥಮ ವಿಜ್ಞಾನಿ ಕಣಾದ ಇವರ ಬಗ್ಗೆ ಮಾಹಿತಿಯನ್ನು […]

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ಆಗತ ಸ್ವಾಗತ ಕಾರ್‍ಯಕ್ರಮ ದಿನಾಂಕ 15.11.2021

Tuesday, November 30th, 2021
ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ಆಗತ ಸ್ವಾಗತ ಕಾರ್‍ಯಕ್ರಮ ದಿನಾಂಕ 15.11.2021

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸ್ವಾಗತಿಸುವ ವಿನೂತನ ಕಾರ್‍ಯಕ್ರಮ ಆಗತ ಸ್ವಾಗತ ಕಾರ್ಯಕ್ರಮ ಮಧುಕರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥರಾದ ಶ್ರೀ ವಾಸುದೇವ ಕಾಮತ್ ಮತ್ತು ಹಿರಿಯ ಪ್ರಾದೇಶಿಕ ವ್ಯವಸ್ಥಾಪಕರಾದ ಶ್ರೀಹರಿ ಹಾಗೂ ಶ್ರೀ ವಿಶ್ವಶ್ರೀ ಕ್ಷೇತ್ರ ಮಹಾಸಂಸ್ಥಾನ ಬೆಂಗಳೂರು ಇಲ್ಲಿನ ಸಂಸ್ಥಾಪಕ ಧರ್ಮಾಧಿಕಾರಿಗಳಾದ ಉಮೇಶ ಶರ್ಮ ಉಪಸ್ಥಿತರಿದ್ದು, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಡಾ| ಪ್ರಭಾಕರ ಭಟ್ […]

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಕನ್ನಡ ರಾಜ್ಯೋತ್ಸವ

Monday, November 1st, 2021
ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಕನ್ನಡ ರಾಜ್ಯೋತ್ಸವ

ಶ್ರೀರಾಮ ವಿದ್ಯಾಕೇಂದ್ರದ ಕನ್ನಡ ರಾಜ್ಯೋತ್ಸವದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಧ್ವಜಾರೋಹಣ ಮಾಡಿದರು. ಅಸ್ತಿತ್ವ ಪ್ರತಿಷ್ಠಾನ ಇದರ ಪ್ರಧಾನ ಸಂಚಾಲಕರಾದ ಎಸ್.ಎಂ. ಉಡುಪ ಕನ್ನಡ ರಾಜ್ಯೋತ್ಸವದ ನಿಮಿತ್ತ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ೭೫ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅಸ್ತಿತ್ವ ಪ್ರತಿಷ್ಠಾನವು ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಹಾಗೂ ಗೀತ ಭಾರತಿ ನಡೆಸಿದ ದೇಶಭಕ್ತಿಗೀತೆ ಗಾಯನ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ವಿತರಿಸಿ ಗೌರವಿಸಿದರು. ಈ […]

ರಾಷ್ಟ್ರೀಯ ಶಿಕ್ಷಣ ನೀತಿ 2020 ಇದರ ಬಗ್ಗೆ ಕಾರ್ಯಾಗಾರ

Saturday, October 30th, 2021
ರಾಷ್ಟ್ರೀಯ ಶಿಕ್ಷಣ ನೀತಿ 2020 ಇದರ ಬಗ್ಗೆ ಕಾರ್ಯಾಗಾರ

ಕಲ್ಲಡ್ಕ ಅ೩೦: ರಾಷ್ಟೀಯ ಶಿಕ್ಷಣ ನೀತಿಯ ಬಗ್ಗೆ ಶಿಕ್ಷಕರಿಗೆ ಕಾರ್‍ಯಾಗಾರ ಶ್ರೀರಾಮ ವಿದ್ಯಾಕೇಂದ್ರದ ಸಾಧನಾ ಸಭಾಭವನದಲ್ಲಿ ದಿನಾಂಕ 30.10.2021ರಂದು ರಾಷ್ಟ್ರೀಯ ಶಿಕ್ಷಣ ನೀತಿ 2020 ಇದರ ಬಗ್ಗೆ ಕಾರ್ಯಾಗಾರ ನಡೆಯಿತು.ಕಾರ್‍ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ಅಂಕಣಕಾರರು ಹಾಗೂ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ಮಾತನಾಡುತ್ತಾ ಒಂದು ದೇಶವು ಉತ್ತಮ ರೀತಿಯಲ್ಲಿ ಅಭಿವೃದ್ದಿ ಹೊಂದಬೇಕಾದರೆ ಅಲ್ಲಿನ ಶಿಕ್ಷಣ ವ್ಯವಸ್ಥೆ ಉತ್ತಮವಾಗಿರಬೇಕು. ಹಾಗೂ ಎಲ್ಲರಿಗೂ ಅವರ ಆಸಕ್ತಿಗನುಗುಣವಾಗಿ ಶಿಕ್ಷಣ ದೊರೆಯಬೇಕು. ಎಂದು ಹೇಳುತ್ತಾ ನೂತನ ಶಿಕ್ಷಣ […]